ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
Cross references
ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು.