ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
Cross references
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.