ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
Cross references
ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.