ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
Cross references
ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು.
ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು