ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
Cross references
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.