ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
Cross references
ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.