Home Bibles ಲೂಕ 6:7 · ಕನ್ನಡ ಬೈಬಲ್
ಲೂಕ 6:7 · ಕನ್ನಡ ಬೈಬಲ್

ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್‌ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.

Cross references

ಕೀರ್ತನೆಗಳು 37:32

ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.

ಕೀರ್ತನೆಗಳು 38:12

ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.

ಯೆಶಾಯ 29:21

ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.

ಯೆರೆಮಿಯ 20:10

ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.

ಮತ್ತಾಯ 26:59

ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

ಮಾರ್ಕ 3:2

ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್‌ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.

ಲೂಕ 11:53

ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.

ಲೂಕ 13:14

ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.

ಲೂಕ 14:1

ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.

ಲೂಕ 20:20

ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.

ಯೋಹಾನ 5:10

ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್‌ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.

ಯೋಹಾನ 9:16

ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ

ಯೋಹಾನ 9:26

ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ

Interlinear

Choose Theme