ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.
Cross references
ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ
ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
(ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.