Home Bibles ಲೂಕ 7:23 · ಕನ್ನಡ ಬೈಬಲ್
ಲೂಕ 7:23 · ಕನ್ನಡ ಬೈಬಲ್

ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.

Cross references

ಯೆಶಾಯ 8:14

ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.

ಮತ್ತಾಯ 11:6

ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.

ಮತ್ತಾಯ 13:57

ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.

ಲೂಕ 2:34

ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.

ಯೋಹಾನ 6:60

ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.

ರೋಮಾಪುರದವರಿಗೆ 9:32

ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.

1 ಕೊರಿಂಥದವರಿಗೆ 1:21

ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.

1 ಕೊರಿಂಥದವರಿಗೆ 2:14

ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.

1 ಪೇತ್ರ 2:7

ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

Interlinear

Choose Theme