ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Cross references
ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.