ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
Cross references
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.