Home Bibles ಲೂಕ 8:1 · ಕನ್ನಡ ಬೈಬಲ್
ಲೂಕ 8:1 · ಕನ್ನಡ ಬೈಬಲ್

ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.

Cross references

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಮತ್ತಾಯ 4:23

ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಮತ್ತಾಯ 9:35

ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.

ಮತ್ತಾಯ 10:2

ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,

ಮತ್ತಾಯ 11:1

ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.

ಮತ್ತಾಯ 13:19

ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.

ಮಾರ್ಕ 1:39

ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.

ಮಾರ್ಕ 3:16

ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.

ಲೂಕ 2:10

ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.

ಲೂಕ 4:18

ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಲೂಕ 4:43

ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.

ಲೂಕ 6:14

ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

ಅಪೋಸ್ತಲರ ಕೃತ್ಯಗಳು 10:38

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಅಪೋಸ್ತಲರ ಕೃತ್ಯಗಳು 13:32

ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.

ರೋಮಾಪುರದವರಿಗೆ 10:15

ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.

Interlinear

Choose Theme