ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
Cross references
ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.