ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
Cross references
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.