ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
Cross references
ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ