ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
Cross references
ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.