ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
Cross references
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.