ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
Cross references
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.