ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.