ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
Cross references
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.