Home Bibles ಲೂಕ 9:11 · ಕನ್ನಡ ಬೈಬಲ್
ಲೂಕ 9:11 · ಕನ್ನಡ ಬೈಬಲ್

ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.

Cross references

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಮತ್ತಾಯ 14:14

ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಮತ್ತಾಯ 21:31

ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 21:43

ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

ಮಾರ್ಕ 6:33

ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.

ಲೂಕ 1:53

ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.

ಲೂಕ 5:31

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.

ಲೂಕ 8:1

ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.

ಲೂಕ 8:10

ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.

ಲೂಕ 9:2

ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.

ಯೋಹಾನ 4:34

ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ಯೋಹಾನ 6:37

ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.

ಅಪೋಸ್ತಲರ ಕೃತ್ಯಗಳು 28:31

ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.

ರೋಮಾಪುರದವರಿಗೆ 10:14

ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?

ರೋಮಾಪುರದವರಿಗೆ 10:17

ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.

ರೋಮಾಪುರದವರಿಗೆ 15:3

ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.

2 ತಿಮೋಥೆಯ 4:2

ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

ಹೆಬ್ರಿಯರಿಗೆ 4:16

ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

Interlinear

Choose Theme