ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
Cross references
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.