ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
Cross references
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು