ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
Cross references
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.