Home Bibles ಲೂಕ 9:44 · ಕನ್ನಡ ಬೈಬಲ್
ಲೂಕ 9:44 · ಕನ್ನಡ ಬೈಬಲ್

ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

Cross references

2 ಸಮುವೇಲ 24:14

ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.

ಯೆಶಾಯ 32:9

ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.

ಮತ್ತಾಯ 16:21

ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಮತ್ತಾಯ 17:22

ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

ಮತ್ತಾಯ 20:18

ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.

ಮತ್ತಾಯ 21:38

ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

ಮತ್ತಾಯ 26:2

ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.

ಮಾರ್ಕ 8:31

ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

ಮಾರ್ಕ 9:31

ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

ಲೂಕ 1:66

ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.

ಲೂಕ 2:19

ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.

ಲೂಕ 2:51

ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.

ಲೂಕ 9:22

ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ಲೂಕ 18:31

ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಲೂಕ 24:6

ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--

ಲೂಕ 24:44

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನ 2:19

ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

ಯೋಹಾನ 16:4

ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.

ಯೋಹಾನ 16:31

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?

ಯೋಹಾನ 19:11

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 3:13

ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

ಅಪೋಸ್ತಲರ ಕೃತ್ಯಗಳು 4:27

ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

1 ತೆಸಲೋನಿಕದವರಿಗೆ 3:3

ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.

ಹೆಬ್ರಿಯರಿಗೆ 2:1

ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.

ಹೆಬ್ರಿಯರಿಗೆ 12:2

ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ

Interlinear

Choose Theme