ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
Cross references
ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.