ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
Cross references
ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ