ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
Cross references
ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.