ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
Cross references
ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ?
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.