ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Cross references
ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.