ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?