ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
Cross references
ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.
ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.
ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.