Home Bibles ಮಲಾಕಿ 2:12 · ಕನ್ನಡ ಬೈಬಲ್
ಮಲಾಕಿ 2:12 · ಕನ್ನಡ ಬೈಬಲ್

ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.

Cross references

ಆದಿಕಾಂಡ 4:3

ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.

ಲೇವ್ಯಕಾಂಡ 18:29

ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.

ಲೇವ್ಯಕಾಂಡ 20:3

ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.

ಅಂಕೆಗಳ ಪುಸ್ತಕ 15:30

ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

ಅಂಕೆಗಳ ಪುಸ್ತಕ 24:5

ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!

ಯೆಹೋಶುವ 23:12

ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ

1 ಸಮುವೇಲ 2:31

ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.

1 ಸಮುವೇಲ 3:14

ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.

1 ಸಮುವೇಲ 15:22

ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.

1 ದಿನವೃತ್ತಾಂತ 25:8

ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.

ಎಜ್ರಾ 10:18

ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.

ನೆಹೆಮ್ಯ 13:28

ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.

ಯೆಶಾಯ 9:14

ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.

ಯೆಶಾಯ 24:1

ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.

ಯೆಶಾಯ 61:8

ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಯೆಶಾಯ 66:3

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.

ಯೆಹೆಜ್ಕೇಲ 14:10

ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.

ಯೆಹೆಜ್ಕೇಲ 24:21

ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.

ಹೊಶೇಯ 4:4

ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.

ಆಮೋಸ 5:22

ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.

ಜೆಕರ್ಯ 12:7

ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.

ಮಲಾಕಿ 1:10

ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.

ಮಲಾಕಿ 2:10

ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?

ಮತ್ತಾಯ 15:14

ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.

2 ತಿಮೋಥೆಯ 3:13

ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ಪ್ರಕಟನೆ 19:20

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

Interlinear

Choose Theme