ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Cross references
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--