ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
Cross references
ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.