ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
Cross references
ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.
ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.
ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--
ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.