ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.