ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.