ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.