ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
Cross references
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.