Home Mark 1 · ಕನ್ನಡ ಬೈಬಲ್

Mark

Chapter 1

ಕನ್ನಡ ಬೈಬಲ್
1ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
2ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
3ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
4ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್‌ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
7ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
8ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
9ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.
10ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
11ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
12ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು.
13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
18ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.
19ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
20ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್‌ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
22ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
23ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
26ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
29ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
30ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
32ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
33ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.
34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
36ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು.
37ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
38ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
39ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
40ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
42ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು.
43ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು;
44ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
45ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme