Home Bibles ಮಾರ್ಕ 1:15 · ಕನ್ನಡ ಬೈಬಲ್
ಮಾರ್ಕ 1:15 · ಕನ್ನಡ ಬೈಬಲ್

ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.

Cross references

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ದಾನಿಯೇಲ 9:25

ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

ಮತ್ತಾಯ 3:2

ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಮತ್ತಾಯ 4:17

ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

ಮತ್ತಾಯ 10:7

ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.

ಮತ್ತಾಯ 21:31

ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಲೂಕ 10:9

ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.

ಲೂಕ 10:11

ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೋಸ್ತಲರ ಕೃತ್ಯಗಳು 2:36

ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 20:21

ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ರೋಮಾಪುರದವರಿಗೆ 16:26

ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.

ಗಲಾತ್ಯದವರಿಗೆ 4:4

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

ಎಫೆಸದವರಿಗೆ 1:10

ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.

2 ತಿಮೋಥೆಯ 2:25

ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

Interlinear

Choose Theme