ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
Cross references
ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.
ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.