ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
Cross references
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.