ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
Cross references
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.