ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
Cross references
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.