Home Bibles ಮಾರ್ಕ 10:17 · ಕನ್ನಡ ಬೈಬಲ್
ಮಾರ್ಕ 10:17 · ಕನ್ನಡ ಬೈಬಲ್

ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.

Cross references

ದಾನಿಯೇಲ 6:10

ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.

ಮತ್ತಾಯ 17:14

ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--

ಮತ್ತಾಯ 19:16

ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.

ಮತ್ತಾಯ 25:34

ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

ಮತ್ತಾಯ 28:8

ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.

ಮಾರ್ಕ 1:40

ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.

ಮಾರ್ಕ 9:25

ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.

ಮಾರ್ಕ 12:14

ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?

ಲೂಕ 10:25

ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ಲೂಕ 18:18

ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ಯೋಹಾನ 3:2

ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.

ಯೋಹಾನ 5:39

ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

ಯೋಹಾನ 6:27

ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.

ಯೋಹಾನ 6:40

ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.

ಯೋಹಾನ 20:2

ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.

ಅಪೋಸ್ತಲರ ಕೃತ್ಯಗಳು 2:37

ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.

ಅಪೋಸ್ತಲರ ಕೃತ್ಯಗಳು 9:6

ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 16:30

ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು

ಅಪೋಸ್ತಲರ ಕೃತ್ಯಗಳು 20:32

ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.

ರೋಮಾಪುರದವರಿಗೆ 2:7

ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

ರೋಮಾಪುರದವರಿಗೆ 6:23

ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ರೋಮಾಪುರದವರಿಗೆ 10:2

ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.

1 ಯೋಹಾನ 2:25

ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.

Interlinear

Choose Theme