ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
Cross references
ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.