ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
Cross references
ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.