Home Bibles ಮಾರ್ಕ 10:22 · ಕನ್ನಡ ಬೈಬಲ್
ಮಾರ್ಕ 10:22 · ಕನ್ನಡ ಬೈಬಲ್

ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.

Cross references

ಆದಿಕಾಂಡ 13:5

ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.

ದ್ವಿತೀಯೋಪದೇಶಕಾಂಡ 6:10

ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ

ದ್ವಿತೀಯೋಪದೇಶಕಾಂಡ 8:11

ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.

ಯೋಬ 21:7

ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?

ಯೆಹೆಜ್ಕೇಲ 33:31

ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.

ಮತ್ತಾಯ 13:22

ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.

ಮತ್ತಾಯ 19:22

ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.

ಮತ್ತಾಯ 27:3

ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು

ಮತ್ತಾಯ 27:24

ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.

ಮಾರ್ಕ 6:20

ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.

ಮಾರ್ಕ 6:26

ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.

ಲೂಕ 12:15

ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

ಲೂಕ 18:23

ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.

2 ಕೊರಿಂಥದವರಿಗೆ 7:10

ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.

ಎಫೆಸದವರಿಗೆ 5:5

ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.

1 ತಿಮೋಥೆಯ 6:9

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

2 ತಿಮೋಥೆಯ 4:10

ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

1 ಯೋಹಾನ 2:15

ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

Interlinear

Choose Theme